ಪಂಚಾಯತ್ ರಾಜ್ 73 ನೇ ತಿದ್ದುಪಡಿ
ಪಂಚಾಯಿತಿ ರಾಜ್ಯಗಳು ಅಥವಾ ಅವುಗಳ ಪರಿಕಲ್ಪನೆಗಳು ಭಾರತಕ್ಕೆ ಹೊಸದೇನಲ್ಲ . ಸಂವಿಧಾನದ 40 ನೇ ಪರಿಚ್ಛೇದದಲ್ಲಿ ರಾಜ್ಯ ನೀತಿಯ ನಿರ್ದೇಶಕ ತತ್ವಗಳು ಭಾಗದಲ್ಲಿ ಅದರ ಬಗ್ಗೆ ಮೊದಲೇ ವಿವರಣೆಯನ್ನು ನೀಡಲಾಗಿದೆ.
40 ನೇ ಪರಿಚ್ಛೇದದಲ್ಲಿ ಹೀಗೆ ಹೇಳಲಾಗಿದೆ ರಾಜ್ಯವು ಗ್ರಾಮಗಳಲ್ಲಿ ಪಂಚಾಯಿತಿ ಗಳನ್ನು ರಚಿಸುವತ್ತ ಹಾಗೂ ಅವುಗಳಿಗೆ ವಿಶೇಷ ಅಧಿಕಾರಗಳನ್ನು ನೀಡುವತ್ತ ಗಮನ ಹರಿಸಿ ಅವು ಸ್ವಾಯತ್ತ ಸಂಸ್ಥೆಗಳಾಗಿ ಕಾರ್ಯನಿರ್ವಹಿಸುವಂತೆ ನಿಯಮಗಳನ್ನು ರಚಿಸಬೇಕು .
73 ನೇ ತಿದ್ದುಪಡಿ ಮೂಲಕ ಸಂವಿಧಾನಕ್ಕೆ ಭಾಗ 9 ನ್ನು ಸೇರಿಸಲಾಯಿತು. 243 ನೇ ಪರಿಚ್ಛೇದದ ಮೂಲಕ ಪಂಚಾಯಿತಿಗೆ ಸಂಬಂಧಿಸಿದ ಶಬ್ಧಗಳಾದ ಜಿಲ್ಲೆ, ಗ್ರಾಮಸಭೆ , ಮಧ್ಯಂತರ ಹಂತ , ಪಂಚಾಯಿತಿ , ಪಂಚಾಯಿತಿ ಪ್ರದೇಶ , ಜನಸಂಖ್ಯೆ ಮುಂತಾದ ಶಬ್ದಗಳ ವಿವರಣೆಯನ್ನು ನೀಡಲಾಯಿತು.
243 A ಇದು ಗ್ರಾಮ ಸಭೆಗಳ ಅಧಿಕಾರಗಳ ಬಗ್ಗೆ ವಿವರಿಸುತ್ತದೆ.
243 B ಇದು ಪ್ರತಿ ರಾಜ್ಯವೂ ಪಂಚಾಯಿತಿಗಳನ್ನು ಹೊಂದಿರಲೇಬೇಕು ಎಂಬುದರ ಬಗ್ಗೆ ಹೇಳುತ್ತದೆ.
243 C ಇದು ಪಂಚಾಯಿತಿ ಹೊಂದಬಹುದಾದ ಸದಸ್ಯರ ಸಂಖ್ಯೆಯ ಬಗ್ಗೆ ಹೇಳುತ್ತದೆ.
243 D ಇದು ಪ್ರತಿಯೊಂದು ಪಂಚಾಯಿತಿಗಳಲ್ಲೂ ಅದು ಹೊಂದಿರಬೇಕಾದ ಪ.ಜಾತಿ , ಪ.ಪಂಗಡಗಳ ಮೀಸಲಾತಿಯ ಬಗ್ಗೆ ಹೇಳುತ್ತದೆ. ಅಲ್ಲದೇ 1/3 ರಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾತಿ ದೊರಯಬೇಕು ಎಂದು ಹೇಳುತ್ತದೆ.
243 E ಪಂಚಾಯಿತಿಗಳ ಕಾಲಾವಧಿಯನ್ನು ವಿವರಿಸುತ್ತದೆ. ಅದನ್ನು 5 ವರ್ಷಗಳಿಗೆ ನಿಗದಿ ಪಡಿಸುತ್ತದೆ.
243 F ಇದು ಸದಸ್ಯರುಗಳು ಅನರ್ಹಗೊಳ್ಳುವ ಬಗ್ಗೆ ವಿವರಣೆ ನೀಡುತ್ತದೆ.
243 G ಪಂಚಾಯಿತಿಗಳ ಅಧಿಕಾರ ಹಾಗೂ ಜವಾಬ್ದಾರಿಗಳು ಈ ಅಧಿಕಾರಗಳು ಪ್ರತಿಯೊಂದು ಪಂಚಾಯಿತಿಯಲ್ಲೂ ರಾಜ್ಯ ಸರ್ಕರಗಳ ಮೇಲ್ವಿಚಾರಣೆಯಲ್ಲಿ ತಮ್ಮ ಕ್ಷೇತ್ರಗಳ ಅಭಿವೃದ್ಧಿಗಾಗಿ ಕೆಲಸಗಳನ್ನ ಕೈಗೊಂಡು ಅವುಗಳನ್ನು ಪೂರ್ಣಗೊಳಿಸಲು ಬೇಕಾದ ಧಿಕಾರಗಳನ್ನು ಒಳಗೊಂಡಿರುತ್ತದೆ.
243 H ತೆರಿಗೆಗಳನ್ನು ವಿಧಿಸುವ ಅಧಿಕಾರವನ್ನು ವಿವರಿಸುತ್ತದೆ.
243 I ಆರ್ಥಿಕ ಸ್ಥಿತಿಗಳನ್ನು ಅವಲೋಕಿಸಲು ಹಣಕಾಸು ಆಯೋಗಗಳ ರಚನೆಯನ್ನು ವಿವರಿಸುತ್ತದೆ.
243 J ಲೆಕ್ಕ ಪರಿವೀಕ್ಷಣೆಯನ್ನು ವಿವರಿಸುತ್ತದೆ.
243 K ಇದು ಪಂಚಾಯಿತಿಯ ಚುನಾವಣೆಯ ಬಗ್ಗೆ ಹೇಳುತ್ತದೆ. ಮತದಾರ ಪಟ್ಟಿ ತಯಾರಿಕೆಯಿಂದ ಹಿಡಿದು ಶಿಸ್ತುಬದ್ಧ ಪಂಚಾಯಿತಿ ರಚನೆಯವರೆಗಿನ ಪ್ರಕ್ರಿಯೆ ಒಳಗೊಂಡಿದೆ.
243 L ರಾಜ್ಯ ಕ್ಷೇತ್ರಗಳಿಗೆ ಈ ಕಾಯ್ದೆಯು ಅನ್ವಯವಾಗುವ ಬಗ್ಗೆ ವಿವರಣೆ ನೀಡುತ್ತದೆ.
243 M ಇದು ಸಂವಿಧಾನದ 244 ನೇ ಪರಿಚ್ಛೇದಗಳಲ್ಲಿ ವಿವರಿಸಿರುವ ಪ್ರಾಂತ್ಯಗಳಿಗೆ 73 ನೇ ತಿದ್ದುಪಡಿ ಕಾಯ್ದೆ ಅನ್ವಯಿಸುವುದಿಲ್ಲ ಎಂಬುದನ್ನು ಹೇಳುತ್ತದೆ.
243 N 73 ನೇ ತಿದ್ದುಪಡಿಯ ಜೊತೆಗೆ ಅದಕ್ಕೆ ಪೂರ್ವದಲ್ಲಿ ಪಂಚಾಯಿತಿಗಳಿಗೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಕಾಯ್ದೆಗಳು ಮುಂದುವರಿಯುವ ಬಗ್ಗೆ ಹೇಳುತ್ತದೆ.
243 O ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳ ಮಧ್ಯಪ್ರವೇಶವನ್ನು ನಿಷೇಧಿಸುತ್ತದೆ.
74 ನೇ ತಿದ್ದು ಪಡಿಯಲ್ಲಿ 9 ಎ ಎಂಬ ಭಾಗವನ್ನು ಸೇರಿಸಲಾಯಿತು. 243 ನೇ ಪರಿಚ್ಛೇದಕ್ಕೆ ಅನುಚ್ಛೇದಗಳನ್ನು ಸೇರಿಸಲಾಯಿತು. 243 P ಯಿಂದ 243 Z G ವರೆಗೆ
74 ನೇ ತಿದ್ದು ಪಡಿಯಲ್ಲಿ 243 P ಇದು ಕಮಿಟಿ , ಜಿಲ್ಲೆ ಮಹಾನಗರ ಪ್ರದೇಶ ಮುನಿಸಿಪಲ್ ಪ್ರದೇಶ , ನಗರಸಭೆ , ಪಂಚಾಯತ್ , ಜನಸಂಖ್ಯೆ ಮುಂತಾದ ಶಬ್ದಗಳಿಗೆ ವಿವರಣೆ ನೀಡುತ್ತದೆ.
74 ನೇ ತಿದ್ದು ಪಡಿಯಲ್ಲಿ 243 Q ಇದು ಮುನಿಸಿಪಲಿಟಿಗಳ ರಚನೆಯ ಬಗ್ಗೆ ಹೇಳುತ್ತದೆ.
74 ನೇ ತಿದ್ದು ಪಡಿಯಲ್ಲಿ 243 R ನಗರ ಸಭೆಗಳ ರಚನೆ ಬಗ್ಗೆ ವಿವರಿಸುತ್ತದೆ.
74 ನೇ ತಿದ್ದು ಪಡಿಯಲ್ಲಿ 243 S ವಾರ್ಡ್ ಕಮಿಟಿಗಳ ರಚನೆ.
74 ನೇ ತಿದ್ದು ಪಡಿಯಲ್ಲಿ 243 T ಸ್ಥಾನಗಳ ಮೀಸಲಾತಿ ಅಂದರೇ ದುರ್ಬಲ ವರ್ಗ ಹಾಗೂ ಮಹಿಳೆಯರಿಗೆ ಸ್ಥಾನಗಳಲ್ಲಿ ಮೀಸಲಾತಿ ಬಗ್ಗೆ ಹೇಳುತ್ತದೆ.
74 ನೇ ತಿದ್ದು ಪಡಿಯಲ್ಲಿ 243 U ನಗರ ಸಭೆಗಳ ಅವಧಿಯ ಬಗ್ಗೆ ಹೇಳುತ್ತದೆ.5 ವರ್ಷಗಳ ಅವಧಿಯನ್ನು ನಿಗದಿಪಡಿಸಿದೆ.
74 ನೇ ತಿದ್ದು ಪಡಿಯಲ್ಲಿ 243 V ಸದಸ್ಯರುಗಳು ಅನರ್ಹಗೊಳ್ಳುವ ಬಗ್ಗೆ ವಿವರಿಸುತ್ತದೆ. ಇದು ಪಂಚಾಯಿತಿಗಳಿಗೆ ಇದ್ದಂತೆಯೇ ಇದೆ.
74 ನೇ ತಿದ್ದು ಪಡಿಯಲ್ಲಿ 243 W ಅಧಿಕಾರ ಹಾಗೂ ಜವಾಬ್ದಾರಿಗಳಉ ಇದೂ ಕೂಡ ನಗರಸಭೆ ಹಾಗೂ ಪಾಲಿಕೆಗಳು.
74 ನೇ ತಿದ್ದು ಪಡಿಯಲ್ಲಿ 243 X ತೆರಿಗೆ ವಿಧಿಸುವ ಅಧಿಕಾರದ ಬಗ್ಗೆ ಹೇಳುತ್ತದೆ. ಅಲ್ಲದೆ ರಾಜ್ಯ ಸರ್ಕಾರದೊಂದಿಗೆ ತೆರಿಗೆ ಹಂಚಿಕೆಯ ಬಗ್ಗೆಯೂ ಹೇಳುತ್ತದೆ.
74 ನೇ ತಿದ್ದು ಪಡಿಯಲ್ಲಿ 243 Y ಇದು ಹಣಕಾಸು ಆಯೋಗದ ಬಗ್ಗೆ ಹೇಳುತ್ತದೆ.
74 ನೇ ತಿದ್ದು ಪಡಿಯಲ್ಲಿ 243 Z ಲೆಕ್ಕ ಪತ್ರವನ್ನು ನಗರಸಭೆಗಳು ಇಡುವ ಬಗ್ಗೆ ಹೇಳುತ್ತದೆ.
74 ನೇ ತಿದ್ದು ಪಡಿಯಲ್ಲಿ 243 Z A ನಗರಸಭೆಯ ಚುನಾವಣೆಗಳ ಬಗ್ಗೆ ಹೇಳುತ್ತದೆ.
74 ನೇ ತಿದ್ದು ಪಡಿಯಲ್ಲಿ 243 Z B ರಾಜ್ಯ ಕ್ಷೇತ್ರಗಳಿಗೆ ಇದು ಅನ್ವಯವಾಗುವ ಬಗ್ಗೆ ವಿವರಿಸುತ್ತದೆ.
74 ನೇ ತಿದ್ದು ಪಡಿಯಲ್ಲಿ 243 Z C ಪಂಚಾಯಿತಿಗಳಲ್ಲಿ ವಿವರಿಸಿದಂತೆ ಕೆಲವು ಪ್ರದೇಶಗಳಿಗೆ ಇದು ಅನ್ವಯವಾಗುವುದಿಲ್ಲ .
74 ನೇ ತಿದ್ದು ಪಡಿಯಲ್ಲಿ 243 Z D ಜಿಲ್ಲಾ ಯೋಜನಾ ಕಮಿಟಿ ಬಗ್ಗೆ ತಿಳಿಸುತ್ತದೆ.
74 ನೇ ತಿದ್ದು ಪಡಿಯಲ್ಲಿ 243 Z E ಮಹಾನಗರ ಪಾಲಿಕೆ ಯೋಜನೆ ಕಮಿಟಿ ಬಗ್ಗೆ ತಿಳಿಸುತ್ತದೆ.
74 ನೇ ತಿದ್ದು ಪಡಿಯಲ್ಲಿ 243 Z F ನಗರಸಭೆಯ ಹಳೆಯ ಕಾಯ್ದೆಗಳ ಮುಂದುವರಿಯುವಿಕೆ ಬಗ್ಗೆ ತಿಳಿಸುತ್ತದೆ.
74 ನೇ ತಿದ್ದು ಪಡಿಯಲ್ಲಿ 243 Z G ನ್ಯಾಯಾಲಯಗಳನ್ನು ಚುನಾವಣೆ ವಿಷಯದಲ್ಲಿ ದೂರವಿಡುತ್ತದೆ.
ಗ್ರಾಮ ಪಂಚಾಯಿತಿಗೆ ಚುನಾಯಿತ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಇರುತ್ತಾನೆ.
ಗ್ರಾಮ ಪಂಚಾಯಿತಿ ಅಧ್ಯಕ್ಷನಿಗೆ ಅಧಿಕಾರಿಗಳ ಮತ್ತು ನೌಕರರ ಕಾರ್ಯಗಳ ಮೇಲೆ ನಿಯಂತ್ರಣಾಧಿಕಾರವಿದೆ.
ಪ್ರತಿಯೊಂದು ಗ್ರಾಮ ಪಂಚಾಯಿತಿಗೆ ಒಬ್ಬ ಪೂರ್ಣಕಾಲಿಕ ಕಾರ್ಯದರ್ಶಿ ಇದ್ದು ಅವರು ಸರ್ಕಾರಿ ಅಧಿಕಾರಿಯಾಗಿರುತ್ತಾರೆ.
ಕಾರ್ಯದರ್ಶಿಗಳು ಜಿಲ್ಲಾ ಪಂಚಾಯಿತಿ ನಿಧಿಯಿಂದ ತಮ್ಮ ಸಂಬಳ ಭತ್ಯೆಗಳನ್ನು ಪಡೆಯುತ್ತಾರೆ.
ಸರ್ಕಾರವು 5 ಸಾವಿರಕ್ಕಿಂತ ಕಡಿಮೆ ಇಲ್ಲದ 7 ಸಾವಿರಕ್ಕಿಂತ ಹೆಚ್ಚು ಇಲ್ಲದ ಜನಸಂಖ್ಯೆಯುಳ್ಳ ಗ್ರಾಮ ಅಥವಾ ಗ್ರಾಮಗಳ ಗುಂಪುಗಳನ್ನು ಒಂದು ಪಂಚಾಯಿತಿ ಎಂದು ಪರಿಗಣಿಸಬಹುದು.
ಕೆಲವೊಂದು ಜಿಲ್ಲೆಗಳಲ್ಲಿ 2500 ಕ್ಕಿಂತ ಕಡಿಮೆಯಿಲ್ಲದ ಪ್ರದೇಶವನ್ನು ಕೆಲವು ಜಿಲ್ಲೆಗಳಲ್ಲಿ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಪ್ರದೇಶವನ್ನು ಗ್ರಾಮ ಪಂಚಾಯಿತಿ ಕೇಂದ್ರಗಳಾಗಿ ಸರ್ಕಾರವು ನಿರ್ಧರಿಸಬಹುದು .
ಸಂವಿಧಾನದ 73 ಮತ್ತು 74 ನೇ ತಿದ್ದು ಪಡಿಗಳ ಮೂಲಕ 1985 ರಲ್ಲಿ ಪಂಚಾಯಿತಿ ರಾಜ್ ಕಾಯಿದೆಯಲ್ಲಿ ಮಹಿಳೆಯರಿಗೆ ಶೇ.25 ರಷ್ಟು ಸ್ಥಾನಗಳ ಮೀಸಲಾತಿಯನ್ನು ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ನೀಡಲಾಯಿತು.
ಸಂವಿಧಾನದ 73 ಮತ್ತು 74 ನೇ ತಿದ್ದು ಪಡಿಗಳ ಮೂಲಕ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿನ ಒಟ್ಟು ಸ್ಥಾನಗಳಲ್ಲಿ ( ಸದಸ್ಯರ ಸ್ಥಾನಗಳಿಂದ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಗಳಿಗೆ ಸೇರಿ ) ಕನಿಷ್ಠ 1/3 ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.
1913 ರಲ್ಲಿ ಮೈಸೂರು ಸಂಸ್ಥಾನವು ಗ್ರಾಮಗಳಲ್ಲಿ ಗ್ರಾಮಾಭಿವೃದ್ಧಿ ಸಂಸ್ಥೆಗಳನ್ನು ರಚಿಸುವ ವಿಷಯ ಕೈಗೆತ್ತಿಕೊಂಡಿತು.
1957 ರಲ್ಲಿ ಬಲವಂತರಾಯ್ ಮೆಹತ್ ಸಮಿತಿ ವರದಿ ಪ್ರಜಾಸತ್ತಾತ್ಮಕ ವಿಕೇಂದ್ರಿಕರಣ ಸಿದ್ಧಾಂತವನ್ನು ಪ್ರತಿಪಾದಿಸಿ ಪ್ರಖ್ಯಾತವಾಯಿತು.
73 ನೇ ತಿದ್ದು ಪಡಿಯಲ್ಲಿ ಮೂರು ಹಂತದ ಪಂಚಾಯಿತಿಗಳ ರಚನೆ ಬಗ್ಗೆ ಗ್ರಾಮ , ಮಧ್ಯಂತರ ಮತ್ತು ಜಿಲ್ಲಾ ಮಟ್ಟದಲ್ಲಿ .
73 ನೇ ತಿದ್ದು ಪಡಿಯಲ್ಲಿ ಪಂಚಾಯಿತಿಯಲ್ಲಿ ಒಟ್ಟು ಸ್ಥಾನಗಳ 1/3 ಭಾಗಕ್ಕೆ ಕಡಿಮೆ ಇಲ್ಲದಂತೆ ಮಹಿಳೆಯರಿಗೆ ಮೀಸಲಿಡಬೇಕು.
73 ನೇ ತಿದ್ದು ಪಡಿಯಲ್ಲಿ ಪ್ರತಿ ರಾಜ್ಯ ಸರ್ಕಾರವೂ ಪಂಚಾಯಿತಿಗಳ ಹಣಕಾಸು ಪರಿಸ್ಥಿತಿ ವಿಮರ್ಶೆ ಮಾಡಿ ಅವುಗಳಿಗೆ ಸರ್ಕಾರ ನೀಡಬೇಕಾದ ಹಣದ ಬಗ್ಗೆ ನಿರ್ಧರಿಸಲು ಹಣಕಾಸು ಆಯೋಗ ಒಂದನ್ನು ಪ್ರತಿ 5 ವರ್ಷಕ್ಕೊಮ್ಮೆ ರಚಿಸಬೇಕು.
ಮೂರು ಹಂತದ ಪಂಚಾಯಿತಿಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸಲು ಅನುಕೂಲವಾಗುವಂತೆ ರಾಜ್ಯ ಚುನಾವಣಾ ಆಯೋಗ ರಚಿಸಲು ಕಲಂ 308 ರಲ್ಲಿ ಅವಕಾಶ ಕಲ್ಪಿಸಲಾಗಿದೆ.
73 ನೇ ತಿದ್ದುಪಡಿಗೆ ಅನುಗುಣವಾಗಿ ಕರ್ನಾಟಕ ಪಂಚಾಯತ್ ರಾಜ್ 1993 ಅಧಿನಿಯವನ್ನು ಜಾರಿಗೆ ತರಲಾಯಿತು.
ಸರ್ಕಾರವು 5 ಸಾವಿರಕ್ಕಿಂತ ಕಡಿಮೆ ಇಲ್ಲದ 7 ಸಾವರಕ್ಕಿಂತ ಹೆಚ್ಚು ಇಲ್ಲದ ಜನಸಂಖ್ಯೆಯನ್ನುಳ್ಳ ಗ್ರಾಮ ಅಥವಾ ಗ್ರಾಮಗಳ ಗುಂಪನ್ನು ಒಂದು ಪಂಚಾಯಿತಿ ಎಂದು ಪರಿಗಣಿಸಿದೆ.
ಗ್ರಾಮ ಪಂಚಾಯಿತಿಗೆ ಚುನಾಯಿತ ಅಧ್ಯಕ್ಷನೂ ಮತ್ತು ಉಪಾಧ್ಯಕ್ಷನು ಇರುತ್ತಾರೆ . ಅಧ್ಯಕ್ಷನಿಗೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳ ಮತ್ತು ನೌಕರರ ಕಾರ್ಯಗಳ ಮೇಲೆ ಮೇಲ್ವಿಚಾರಣೆ ಮತ್ತು ನಿಯಂತ್ರಣದ ಅಧಿಕಾರವಿದೆ.
ಪಂಚಾಯಿತಿ ಸಮಿತಿ ಆಡಳಿತವು ಚುನಾಯಿತ ಅಧ್ಯಕ್ಷ ಮತ್ತು ಸರ್ಕಾರದಿಂದ ನೇಮಿಸಲ್ಪಟ್ಟ ಕಾರ್ಯನಿರ್ವಾಹಣಾಧಿಕಾರಿಯಿಂದ ನಡೆಸಲ್ಪಡುತ್ತದೆ.
ಕಾರ್ಯನಿರ್ವಹಣಾಧಿಕಾರಿಯು ರಾಜ್ಯ ಸರ್ಕಾರದ ಎ ದರ್ಜೆ ಅಧಿಕಾರಿ ಅಥವಾ ಅಸಿಸ್ಟೆಂಟ್ ಕಮಿಷನರ್ ರವರಿಗೆ ಸಮನಾ ಹುದ್ದೆಯವರಾಗಿದ್ದು , ಅಧ್ಯಕ್ಷರ ಮೇಲ್ವಿಚಾರಣೆಗೆ ಒಳಪಟ್ಟು ಪಂಚಾಯಿತಿ ಸಮಿತಿಯ ಎಲ್ಲ ಅಧಿಕಾರಗಳು ಹಾಗೂ ನೌಕರರ ಮೇಲೆ ಹತೋಟಿ ಹೊಂದಿದ್ದು ಕೆಲಸಗಳನ್ನು ನಿರ್ವಹಿಸುತ್ತಾರೆ.
ಜಿಲ್ಲಾ ಪಂಚಾಯತ್ ಪ್ರತಿ ನಲ್ವತ್ತು ಸಾವಿರ ಜನಸಂಖ್ಯೆಗೆ ಒಬ್ಬರಂತೆ ಹಾಗೂ ಚಿಕ್ಕಮಗಳೂರು , ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತಿ ಮೂವತ್ತು ಸಾವಿರ ಜನಸಂಖ್ಯೆಗೆ ಹಾಗೂ ಕೊಡಗು ಜಿಲ್ಲೆಯಲ್ಲಿ ಹದಿನೆಂಟು ಸಾವರ ಜನಸಂಖ್ಯೆಗೆ ಒಬ್ಬರಂತೆ ಆರಿಸಿ ಬರುವ ಚುನಾಯಿತ ಸದಸ್ಯರಿರುತ್ತಾರೆ.
ತಾಲ್ಲೂಕ್ ಪಂಚಾಯಿತಿ ಪ್ರತಿ ಹತ್ತು ಸಾವಿರ ಜನಸಂಖ್ಯೆಗೆ ಒಬ್ಬರಂತೆ ಸದಸ್ಯರು ಚುನಾಯಿತರಾಗಿ ಬರುವರು .
ಜಿಲ್ಲಾಪಂಚಾಯತ್ ನಲ್ಲಿ ಜಿಲ್ಲೆಯ ವಿಧಾನಭಾ , ಲೋಕಸಭಾ , ತಾಲ್ಲೂಕ್ ಪಂಚಾಯಿತಿಯ ಅಧ್ಯಕ್ಷರುಗಳು ರಾಜ್ಯ ಸಭಾ ಮತ್ತು ವಿಧಾನಪರಿಷತ್ತಿನ ಸದಸ್ಯರುಗಳು ಜಿಲ್ಲಾ ಪಂಚಾಯಿತಿಯ ಸದಸ್ಯರುಗಳಾಗಿರುತ್ತಾರೆ.
ಬಹಳ ಹಿಂದೆ “ ಪಂಚರು ” ಪಂಚಾಯಿತಿಗಳ ಮುಖ್ಯಸ್ಥರಾಗಿರುತ್ತಿದ್ದರು.
ಸಾಮಾಜಿಕವಾಗಿ , ಆರ್ಥಿಕವಾಗಿ ಪ್ರಬಲರಾಗಿದ್ದವರು ಮಾತ್ರ ವಂಶಪಾರಂಪರ್ಯವಾಗಿ “ ಪಂಚ” ರಾಗಿ ಅಧಿಕಾರಿ ನಡೆಸಲು ಅವಕಾಶವಿತ್ತು.
1884 ರಲ್ಲಿ ಬ್ರಿಟಿಷರು ಸ್ಥಳೀಯ ಸರ್ಕಾರಕ್ಕೆ ಆಡಳಿತಾತ್ಮಕ ರೂಪ ಕೊಡುವ ಪ್ರಯತ್ನ ಮಾಡಿದರು. ಒಂದು ಜಿಲ್ಲೆಯನ್ನು ಆಡಳಿತ ಘಟಕವಾಗಿ ರೂಪಿಸಿದರು. ಈ ವ್ಯವಸ್ಥೆಗೆ “ ಲೋಕಲ್ ಫಂಡ್ ಸಮಿತಿ ” ಎಂದು ಕರೆಯಲಾಯಿತು.
“ ಲೋಕಲ್ ಫಂಡ್ ಸಮಿತಿ ”ಯಲ್ಲಿ ಜಿಲ್ಲಾ ಕಮಿಷನರ್ ಅಧ್ಯಕ್ಷರಾಗಿದ್ದು ಇನಾಂದಾರರು ಮತ್ತು ಭೂಮಾಲಿಕರು ಸದಸ್ಯರಾಗಿದ್ದರು.
ಕರ್ನಾಟಕದಲ್ಲಿ 1903 ರಲ್ಲಿ “ ದಿ ಮೈಸೂರು ಲೋಕಲ್ ಬೋರ್ಡ್ ರೆಗ್ಯುಲೇಷನ್ ” ಕಾಯಿದೆಯನ್ನು ಜಾರಿಗೆ ತರಲಾಯಿತು.
“ ದಿ ಮೈಸೂರು ಲೋಕಲ್ ಬೋರ್ಡ್ ರೆಗ್ಯುಲೇಷನ್ ” ಈ ಕಾಯಿದೆಯ ಪ್ರಕಾರ ಜಿಲ್ಲಾ ಮಂಡಳಿ , ತಾಲ್ಲೂಕು ಬೋರ್ಡ್ , ಪಂಚಾಯಿತಿ ಸಂಘಟನೆ ಎಂಬ ಮೂರು ಹಂತದಲ್ಲಿ ಜಾರಿಯಾಯಿತು.
1919 ರಲ್ಲಿ ಅಂದಿನ ಮೈಸೂರು ಸರ್ಕಾರ “ ದಿ ಮೈಸೂರು ಲೋಕಲ್ ಬೋರ್ಡ್ ಮತ್ತು ವಿಲೇಜ್ ಪಂಚಾಯತ್ ಕಾಯಿದೆ “ ಯನ್ನು ಜಾರಿಗೆ ತಂದಿತು.
1926 ರಲ್ಲಿ “ ದಿ ಮೈಸೂರು ಲೋಕಲ್ ಬೋರ್ಡ್ ಮತ್ತು ವಿಲೇಜ್ ಪಂಚಾಯತ್ ಕಾಯಿದೆ “ ಯಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಒತ್ತು ನೀಡಲಾಯಿತು. ಆದರೆ 21 ವರ್ಷ ದಾಟಿದ ಪುರಷರಿಗೆ ಮಾತ್ರ ಮತದಾನದ ಅವಕಾಶ ಕಲ್ಪಿಸಲಾಗಿತ್ತು.
“ ದಿ ಮೈಸೂರು ಲೋಕಲ್ ಬೋರ್ಡ್ ಮತ್ತು ವಿಲೇಜ್ ಪಂಚಾಯತ್ ಕಾಯಿದೆ “ ಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಗ್ರಾಮ ಪಂಚಾಯಿತಿಗಳ ಕಾರ್ಯದರ್ಶಿಗಳ ನೇಮಕಕ್ಕೆ ಅವಕಾಶ ಮಾಡಿಕೊಡಲಾಯಿತು. ಚುನಾಯಿತ ಸದಸ್ಯರೊಬ್ಬರನ್ನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗುತ್ತಿತ್ತು.
1949 ಸೆಪ್ಟೆಂಬರ್ ತಿಂಗಳಲ್ಲಿ ಮೈಸೂರು ರಾಜ್ಯದ ಸ್ಥಳೀಯಾಡಳಿತ ವ್ಯವಸ್ಥೆಯಲ್ಲಿನ ಕೊರತೆಗಳ ಅಧ್ಯಯನ ನಡೆಸಲು ವೆಂಕಟಪ್ಪ ನೇತೃತ್ವದ ಸಮಿತಿಯನ್ನು ರಚಿಸಲಾಯಿತು.
ವೆಂಕಟಪ್ಪ ಸಮಿತಿಯು 1950 ಜೂನ್ ತಿಂಗಳಲ್ಲಿ ಸಮಿತಿಯು ವರದಿಯನ್ನು ಒಪ್ಪಿಸಿತು.
ವೆಂಕಟಪ್ಪ ಸಮಿತಿಯು ಗ್ರಾಮ ಮಟ್ಟದಲ್ಲಿ ಗ್ರೂಪ್ ಪಂಚಾಯಿತಿ , ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಮಂಡಳಿ ಇರುವ ಎರಡು ಹಂತಗಳ ಸ್ಥಳೀಯಾಡಳಿತ ವ್ಯವಸ್ಥೆ ಮಾಡಬೇಕು .
1959 ರಿಂದ ಎಲ್ಲಾ ರಾಜ್ಯಗಳಲ್ಲೂ ಪಂಚಾಯಿತಿ ರಾಜ್ ಅಧಿನಿಯಮವನ್ನು ಜಾರಿಗೆ ತಂದು ಗ್ರಾಮ ಪಂಚಾಯಿತಿ. ಬ್ಲಾಕ್ ಪಂಚಾಯಿತಿ ಸಮಿತಿ ( ತಾಲ್ಲೂಕು ಬೋರ್ಡ್ ) , ಜಿಲ್ಲಾ ಪರಿಷತ್ ಎಂಬ ಮೂರು ಹಂತಗಳ ಪಂಚಾಯಿತಿ ವ್ಯವಸ್ಥೆಯನ್ನು ಜಾರಿಗೆ ತಂದಿತು.
ಅಶೋಕ್ ಮೆಹ್ತಾ ಸಮಿತಿಯು ಎರಡು ಹಂತದ ಪಂಚಾಯಿತಿಗಳಿಗೆ ಶಿಫಾರಸ್ಸು ಮಾಡಿತು. ( ಮಂಡಲ ಪಂಚಾಯಿತಿ , ಜಿಲ್ಲಾ ಪರಿಷತ್ ) .
ಪಶ್ಚಿಮ ಬಂಗಾಳ ಮತ್ತು ಕರ್ನಾಟಕ ಸರ್ಕಾರಗಳು ಅಶೋಕ್ ಮೆಹ್ತಾ ಸಮಿತಿಯ ಶಿಫಾರಸ್ಸಿನ ಆಧಾರದಲ್ಲಿ ಪಂಚಾಯಿತಿ ರಾಜ್ ವ್ಯವಸ್ಥೆಯನ್ನು ಹುಟ್ಟು ಹಾಕಿದವು.
ಪಂಚಾಯಿತಿ ರಾಜ್ ಸಚಿವ ಅಬ್ದುಲ್ ನಜೀರ್ ಸಾಬ್ ರವರ ಪ್ರಯತ್ನದಿಂದ 1987 – 1992 ರ ಅವಧಿಯಲ್ಲಿ 2 ಹಂತಗಳ ವ್ಯವಸ್ಥೆ ಜಾರಿಗೆ ಬಂದಿತು.
ಅಶೋಕ್ ಮೆಹ್ತಾ ಸಮಿತಿಯು ಮಹಿಳೆಯರಿಗೆ ಶೇ.25 ರಷ್ಟು ಪರಿಶಿಷ್ಟರಿಗೆ ಶೇ.15 ರಷ್ಟು ರಾಜಕೀಯ ಮೀಸಲಾತಿಯನ್ನು ಒದಗಿಸಿದ ಹೆಗ್ಗಳಿಕೆ ಕೂಡ ನಜೀರ್ ಸಾಬ್ ಅವರಿಗೆ ಸಲ್ಲಬೇಕು.
ಕರ್ನಾಟಕ ಮತ್ತು ಪಶ್ಚಿಮ ಬಂಗಾಳದಲ್ಲಿನ ವ್ಯವಸ್ಥೆಯನ್ನು ಕಂಡು ಪ್ರೇರಿತರಾದ ಅಂದಿನ ಪ್ರಧಾನಿ ರಾಜೀವ್ ಗಾಂಧಿಯವರು ಡಾ.ಎಲ್.ಎಂ.ಸಿಂಘ್ವಿ ನೇತೃತ್ವದ ಸಮಿತಿಯನ್ನು ರಚಿಸಿದರು.
ಡಾ.ಎಲ್.ಎಂ.ಸಿಂಘ್ವಿ ನೇತೃತ್ವದ ಸಮಿತಿಯು ಇಡೀ ದೇಶಕ್ಕೆ ಏಕರೂಪದ ಪಂಚಾಯಿತಿ ರಾಜ್ ವ್ಯವಸ್ಥೆಯ ಮಾದರಿಯನ್ನು ಈ ಸಮಿತಿ ಶಿಫಾರಸ್ಸು ಮಾಡಿತು.
ಡಾ.ಎಲ್.ಎಂ.ಸಿಂಘ್ವಿ ನೇತೃತ್ವದ ಸಮಿತಿಯ ಫಲವಾಗಿಯೇ ಸಂವಿಧಾನದ 73 ನೇ ತಿದ್ದುಪಡಿಯನ್ನು ತರಲಾಗಿದೆ. 1993 ರ ಏಪ್ರಿಲ್ 24 ರಿಂದ ಸಂವಿಧಾನದ 73 ನೇ ತಿದ್ದುಪಡಿಯ ಆಧಾರದಲ್ಲಿ ಮೂರು ಹಂತಗಳ ಪಂಚಾಯಿತಿ ರಾಜ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.
73 ನೇ ತಿದ್ದುಪಡಿಯಲ್ಲಿ ಮಹಿಳೆಯರಿಗೆ 1/3 ಭಾಗ ಮೀಸಲಾತಿ ( ಮುಂದಿನ ಚುನಾವಣೆಯಿಂದ ಮಹಳಿಯೆರಿಗೆ ಶೇ.50 ರಷ್ಟು ಮೀಸಲಾತಿ )
73 ನೇ ತಿದ್ದುಪಡಿಯಲ್ಲಿ ಪ್ರತಿ 5 ವರ್ಷಕ್ಕೊಮ್ಮೆ ಮೂರು ಹಂತದ ಪಂಚಾಯಿತಿಗಳಿಗೆ ಚುನಾವಣೆ ನಡೆಸುವುದು.
73 ನೇ ತಿದ್ದುಪಡಿಯನ್ವಯ ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳಿಗೆ ವಿಶೇಷವಾಗಿ ಶೇ.33 ರಷ್ಟು ರಾಜಕೀಯ ಮೀಸಲಾತಿಯನ್ನು ಒದಗಿಸಲಾಗಿದೆ. ಇದರಲ್ಲಿ ಅತ್ಯಂತ ಹಿಂದುಳಿದ ವರ್ಗಕ್ಕೆ ಶೇ.80 ಹಾಗೂ ಹಿಂದುಳಿದ ವರ್ಗಕ್ಕೆ ಶೇ.20 ರಷ್ಟು ಮೀಸಲಾತಿಯನ್ನು ಕಲ್ಪಿಸಿದೆ.
ಕರ್ನಾಟಕ ಪಂಚಾಯಿತಿ ರಾಜ್ ಕಾಯಿದೆಗೆ 2002 ರಲ್ಲಿ ತಿದ್ದುಪಡಿಯನ್ನು ತರುವ ಮೂಲಕ ವಾರ್ಡ್ ಸಭೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ.
ಕರ್ನಾಟಕದಲ್ಲಿ ರಾಜ್ಯ ಮಟ್ಟದಲ್ಲಿ ಪಂಚಾಯಿತಿ ರಾಜ್ ಸಂಸ್ಥೆಗಳ ಅಭಿವೃದ್ದಿ ಕುರಿತು ಚರ್ಚಿಸಿ ಸಲಹೆ ನೀಡಲು ಪೂರಕವಾಗಿ ರಾಜ್ಯ ಪಂಚಾಯಿತಿ ಕೌನ್ಸಿಲ್ ರಚನೆಗೆ ಅವಕಾಶ ಕಲ್ಪಿಸಿದೆ.
ಸಂವಿಧಾನದ 73 ನೇ ತಿದ್ದುಪಡಿ ಗ್ರಾಮ ಸಭೆಗಳನ್ನು ಅಸ್ತಿತ್ವಕ್ಕೆ ತಂದಿತು. ಇದರಲ್ಲಿ ಕರ್ನಾಟಕವು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ತಳಮಟ್ಟದಲ್ಲಿ ವಾರ್ಡ್ ಸಭೆಗಳನ್ನು ಹುಟ್ಟು ಹಾಕಿದೆ.
6 ತಿಂಗಳಿಗೊಮ್ಮೆ ವಾರ್ಡ್ ಸಭೆ ನಡೆಸುವುದು
ವರ್ಷಕ್ಕೆ ಎರಡು ಬಾರಿ ವಾರ್ಡ್ ಸಭೆ ನಡೆಸುವುದು.
ವಾರ್ಡಿನ ಮತದಾರರ ಶೇ.10 ರಷ್ಟು ಅಥವಾ 20 ಸದಸ್ಯರು ಇವುಗಳಲ್ಲಿ ಯಾವುದು ಕಡಿಮೆಯೋ ಅದು ವಾರ್ಡ್ ಸಭೆಯ ಕೋರಂ .
ವಾರ್ಡ್ ಸಭೆಯ ಹಾಜರಾತಿಯಲ್ಲಿ ಮಹಿಳೆಯರ ಸಂಖ್ಯೆ ಶೇ.33 ಕ್ಕೆ ಕಡಿಮೆ ಇಲ್ಲದಂತೆ ನೋಡಿಕೊಳ್ಳಬೇಕು . ಪರಿಶಿಷ್ಠ ಜಾತಿ / ಪಂಗಡಗಳ ಜನರ ಹಾಜಾರಾತಿ ಪ್ರಮಾಣ ಅವರ ಒಟ್ಟು ಜನಸಂಖ್ಯೆಗೆ ಅನುಗುಣವಾಗಿರಬೇಕು .
ವಾರ್ಡ್ ಸಭೆಯ ಅಧ್ಯಕ್ಷತೆಯನ್ನು ಆ ವಾರ್ಡಿನ ಸದಸ್ಯರೇ ವಹಿಸಬೇಕು . ಒಂದು ವಾರ್ಡಿನಲ್ಲಿ ಒಂದಕ್ಕಿಂತ ಹೆಚ್ಚು ಸದಸ್ಯರು ಇರುವ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ನಾಮ ನಿರ್ದೇಶ ಮಾಡಿದ ಅದೇ ವಾರ್ಡಿನ ಇತರ ಸದಸ್ಯ ಅಧ್ಯಕ್ಷತೆ ವಹಿಸಬೇಕು.
ವಾರ್ಡ್ ಸಭೆಯ ಕಾರ್ಯಸೂಚಿಯನ್ನು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಅಂಗೀಕರಿಸಬೇಕು
ಕನಿಷ್ಠ ಒಂದು ವಾರಕ್ಕೆ ಮುಂಚಿತವಾಗಿ ವಾರ್ಡ್ ಸಭೆಗೆ ಸಾಕಷ್ಟು ಪ್ರಚಾರ ನೀಡಬೇಕು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡ್ ಸಭೆಗಳನ್ನು ಮೊದಲು ನಡೆಸಬೇಕು . ನಂತರ ಒಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಂದು ಗ್ರಾಮ ಸಭೆಯನ್ನು ನಡೆಸಬೇಕು.
ಗ್ರಾಮ ಸಭೆಯನ್ನು ಕನಿಷ್ಠ 6 ತಿಂಗಳಿಗೊಮ್ಮೆ ನಡೆಸಬೇಕು.
ಗ್ರಾಮ ಸಭೆಯ ಶೇ.10 ಕ್ಕಿಂತ ಕಡಿಮೆಯಿಲ್ಲದ ಸದಸ್ಯರ ಕೋರಿಕೆಯ ಮೇರೆಗೆ ವಿಶೇಷ ಗ್ರಾಮಸಭೆಯನ್ನು ಕರೆಯಲು ಕಾಯಿದೆಯಲ್ಲಿ ಅವಕಾಶ ಕಲ್ಪಿಸಿದೆ. ಇಂತಹ ಸಂದರ್ಭಗಳಲ್ಲಿ ಗ್ರಾಮ ಸಭೆಗಳನ್ನು ಕರೆಯುವುದು ಕಡ್ಡಾಯವಾಗಿದೆ. ಆದರೆ ವಿಶೇಷ ಗ್ರಾಮ ಸಭೆಗಳ ನಡುವೆ ಕನಿಷ್ಟ ಮೂರು ತಿಂಗಳ ಅಂತರವಿರಬೇಕು.
ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರೇ ವಹಿಸಬೇಕು. ಅವರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರು ಅಥವಾ ಗ್ರಾಮ ಪಂಚಾಯಿತಿ ನಾಮ ನಿರ್ದೇಶನ ಮಾಡಿದ ಸದಸ್ಯರು ವಹಿಸಬೇಕು.
ಗ್ರಾಮ ಸಭೆ ಸದಸ್ಯರ ಒಟ್ಟು ಸಂಖ್ಯೆಯ 1/10 ಕ್ಕೆ ಕಡಿಮೆಯಿಲ್ಲದಷ್ಟು ಅಥವಾ 100 ಸದಸ್ಯರು ಇವುಗಳಲ್ಲಿ ಯಾವುದು ಕಡಿಮೇಯೋ ಅದು ಗ್ರಾಮ ಸಭೆಯ ಕೋರಂ .
ಗ್ರಾಮ ಸಭೆಗೆ ಪ್ರತಿ ವಾರ್ಡಿನಿಂದ ಕನಿಷ್ಟ 10 ಜನರು ಗ್ರಾಮ ಸಭೆಯಲ್ಲಿ ಪಾಲ್ಗೋಳ್ಳುವಂತೆ ನೋಡಿಕೊಳ್ಳಬೇಕು.
ಗ್ರಾಮ ಸಭೆಯ ಹಾಜರಾತಿಯಲ್ಲಿ ಮಹಿಳೆಯರ ಸಂಖ್ಯೆ ಶೇ.33 ಕ್ಕೆ ಕಡಿಮೆ ಇಲ್ಲದಂತೆ ನೋಡಿಕೊಳ್ಳಬೇಕು. ಪರಿಶಿಷ್ಟ ಜಾತಿ / ಪಂಗಡ ಜನರ ಹಾಜರಾತಿ ಪ್ರಮಾಣ ಅವರ ಜನಸಂಖ್ಯೆಗೆ ಅನುಗುಣವಾಗಿರಬೇಕು.
ಪ್ರಕರಣ 4 ರಲ್ಲಿ ಗ್ರಾಮ ಪಂಚಾಯಿತಿ ರಚನೆ ಕುರಿತು ಸ್ಪಷ್ಟಪಡಿಸಲಾಗಿದೆ
0 Comments